ಇಂದು ಅಕಸ್ಮಾತ್ ಆಗಿ ಟೀನಾ ರವರ ಬ್ಲಾಗ್ಗೆ ಭೇಟಿ ನೀಡಿದೆ ಅಲ್ಲಿ ನಡೆಯುತಿದ್ದ ಕೆಲವು ಚರ್ಚೆಗಳು ಸ್ವಾರಸ್ಯ ಹಾಗು ಯೋಚಿಸಬೇಕಾದ ಗಂಭೀರ ವಿಚಾರಗಳೇ ಸರಿ.
ಹೆಣ್ಣಿನ ಮೇಲೆ ಅತ್ಯಾಚಾರ ಯಾಕೆ ನಡೆಯುತ್ತದೆ ಎಂಬುದನ್ನು ಮೊದಲು ವಿಶ್ಲೇಷಿಸಿದಾಗ ಈ ಕಾರಣಗಳು ನನಗೆ ಹೊಳೆದವು. ನನ್ನ ಜೀವನ ಯಾತ್ರೆಯಲ್ಲಿ ಕೆಲವು ಇಂತಹ ಸಂಗತಿಗಳೂ ನಡೆದಿವೆ. ಅದನ್ನೂ ಇಲ್ಲಿ ಬರೆದ್ದಿದ್ದೇನೆ
ಸಂಧರ್ಭ:
ಗಂಡಸರು ಅನುಕೂಲಸಿಂಧುಗಳು.
ಇಂದು ಕ್ಲೋಸ್ ಫ್ರೆಂಡ್ ಆಗಿರುವುವನೇ ನಾಳೆ ರೇಪಿಸ್ಟ್ ಆಗಬಹುದು.
ನಾನು ಹಿಂದೆ ಕೆಲಸ ಮಾಡುತ್ತಿದ್ದ ಕಂಪನಿಯಲ್ಲಿನ ಲೈಬ್ರರಿಯಲ್ಲಿ ಶನಿವಾರ (ಅಂದು ರಜಾ) ಭೇಟಿ ಕೊಟ್ಟಿದ್ದೆ.
ಯಾರು ಇರಲಿಲ್ಲ ವಾದ್ದರಿಂದ ಆತನ ಬುದ್ದಿಗೇನಾಯಿತೊ ಮೇಲೆ ಬೀಳಲು ಹವಣಿಸಿದ.
ಇಷ್ಟು ದಿನ ಕ್ಲೋಸ್ ಆಗಿ ಮಾತಾಡುತ್ತಿದ್ದೆಯಲ್ಲ . ಇಂದು ಇದಕ್ಕೂ ಒಪ್ಪಿಕೋ ಎಂದ./ ಹ್ಯಾಗೊ ಅವನಿಂದ ತಪ್ಪಿಸಿಕೊಂಡು ಬಂದಾಗಲಷ್ಟೆ ನೆಮ್ಮದಿಯ ಉಸಿರು ಬಿಟ್ಟೆ. ಯಾರಿಗೂ ಹೇಳಲಿಲ್ಲ . ಹೇಳಿದರೆ ನೀನ್ಯಾಕೆ ರಜಾದಿನದಲ್ಲಿ ಹೋದೆ . ನಿನ್ನದೇ ತಪ್ಪು ಅಂತಾರೆ.
ಹೆಣ್ಣಿನ ಸ್ಥಿತಿ
ಅಕಸ್ಮಾತ್ ಹೆಣ್ಣು ಗಂಡಿಗಿಂತ ಆರ್ಥಿಕವಾಗಿಯೋ ಅಥವ ದೈಹಿಕವಾಗಿಯೊ ದುರ್ಬಲಳಾಗಿದ್ದರೆ ಅವಳು ಗಂಡಿಗೆ ಬಡಿಸಿಟ್ಟ ಎಲೆ ಎಂದುಕೊಳ್ಳುತ್ತಾನೆ . ಸಾಮಾನ್ಯವಾಗಿ ಹುಡುಗಿಯರು ತಮ್ಮ ಕೆಲಸದಲ್ಲಿ ಅಥವ ಕಾಲೇಜಿನಲ್ಲಿ ಇಂತಹ ಸಂಧರ್ಭ ಎದುರಿಸಬೇಕಾಗುತ್ತದೆ.
ಗಂಡಿನ ಸ್ಥಿತಿ
ಗಂಡು ಕೆಲವೊಮ್ಮೆ ಇಲ್ಲೀವರೆಗೆ ಹೆಣ್ಣನ್ನೂ ಕಾಣದಿದ್ದಾಗ(ಬ್ರಹ್ಮಚಾರಿಗಳಾಗಿದ್ದವರು) ಮತ್ತು ತಮ್ಮ ಕಾಮ ತೀವ್ರತೆಯನ್ನು ಹತೋಟಿಯಲ್ಲಿಟ್ಟುಕೊಳ್ಳದೇ ಇದ್ದಾಗ ಅತ್ಯಾಚಾರಕ್ಕೆ ದಾರಿ ಯಾಗಬಹುದು.
ಹೆಣ್ಣಿನ ನಡತೆ
ಯಾರೇನೆ ಅಂದರೂ ಹೆಣ್ಣು ಯಾರೊಡನೆಯಾದರೂ ನಗುತ್ತಾ ಮಾತನಾಡಿದರೆ ಅವಳು ’ಅದಕ್ಕೆ ಕೊಡುವ ಇಂಡೈರೆಕ್ಟ್ ಇನ್ವಿಟೇಶನ್ ಅಂತ ಅಂದುಕೊಳ್ಳುವ ಸಮಾಜ ಇನ್ನೂ ಬದಲಾಗುವುದಿಲ್ಲ. ಆಗುವುದೂ ಇಲ್ಲ.
ಒಮ್ಮೆ ಒಂದು ಸಂಸ್ಥೆಯ ಅಧಿಕಾರಿಯಾಗಿ ನಾನು ಒಬ್ಬ ವಿದ್ಯಾರ್ಥಿಯೊಡನೆ ರಸ್ತೆಯಲ್ಲಿ ಸಿಕ್ಕನೆಂದು ಮಾತನಾಡಿ ಸ್ವಲ್ಪ ದೂರ ಬಂದೊಡನೆ ಯಾರೋ " ಅವನ ಜೊತೇಲಿ ಮಾತ್ರ ಬರ್ತೀರ ನಮ್ಮ ಜೊತೆ ಬರಲ್ಲ್ವಾ " ಅಂತ ಕೆಟ್ಟಾದಾಗಿ ಕೇಳಿದಾಗ ಇನ್ನೊಮ್ಮೆ ಯಾರೊಡನೆಯೂ ರಸ್ತೆಯಲ್ಲಿ ಮಾತನಾಡುತ್ತಾ ನಿಲ್ಲಬಾರದು ಎನಿಸಿತು.
ಹೆಣ್ಣಿನ ಉಡುಪು
ಖಂಡಿತಾ ಇದು ಸತ್ಯ.
ಈಗಿನ ಫ್ಯಾಶನ್ ಕಡಿಮೆ ಬಟ್ಟೆ ಹಾಕುವುದು. ಅದು ನಿಜ . ನಾನೂ ಒಪ್ಪುತ್ತೇನೆ. ಅದು ಎಲ್ಲಿವರೆಗೆ?
ನಾವು ಸಮಾಜದಲ್ಲಿ ಬದುಕುತ್ತಿದ್ದಾಗ ಸಮಾಜದ ಕಟ್ಟುಪಾಡುಗಳು ಅತಿ ಮುಖ್ಯ. ಅದನ್ನು ಮೀರಿದವಳು, ’ಅಂತಹವಳು’ ಎಂದು ಬ್ರಾಂಡ್ ಆಗುವುದು ನಿಜ. ಅಂತಹವರು ಗಂಡನ್ನು ಪ್ರಚೋದಿಸುವುದೂ ನಿಜ
ನಾನು ಚಿಕ್ಕವಳಿದ್ದಾಗ (೧೫ ವರ್ಷದವಳು)ಒಂದು ನಗರವಾಗುತ್ತಿರುವ ಹಳ್ಳಿಯಲ್ಲಿ ಕೆಲ ಕಾಲ ಇದ್ದೆವು . ಕೇವಲ ಪ್ಯಾಂಟ್ ಶರ್ಟ್ ಧರಿಸಿ ನಾನು ಆ ಹಳ್ಳಿಯಲ್ಲಿ ಬರುತ್ತಿದ್ದಾಗ ಸಭ್ಯತೆಯ ಎಲ್ಲೆ ಮೀರಿ ಅಲ್ಲಿನ ಗಂಡಸರು ಮಾತನಾಡಿದ್ದು ನೆನಪಿದೆ.. ಅಂದಿನಿಂದ ಆ ಹಳ್ಳಿಯಲ್ಲಿ ಇರುವಷ್ಟು ದಿನ ನಾನು ಚೂಡಿದಾರ ಹಾಕಿಯೇ ಒಡಾಡುತ್ತಿದೆ. ಅಂತಹ ಪ್ರಸಂಗ ನನಗೆ ಎದುರಾಗಲೇ ಇಲ್ಲ.
ಪಾಶ್ಚಾತ್ಯ ರಾಷ್ತ್ರಗಳಲ್ಲಿ ಹೇಗೊ ಗೊತ್ತಿಲ್ಲ .
ಆದರೆ ನಮ್ಮ ಸಮಾಜದ ಲಕ್ಶ್ಮಣ ರೇಖೆ ಯನ್ನೂ ದಾಟದೇ ಇರುವ ವರೆಗೂ ಹೆಣ್ಣು ಎಂದಿಗೂ ಈ ಅತ್ಯಾಚಾರಕ್ಕೆ ಬಲಿಯಾಗುವುದು ಕಡಿಮೆ
ಹೆಣ್ಣು ಇದಕ್ಕೆ ಏನು ಮಾಡಬಹುದು
ನನ್ನ ಅನಿಸಿಕೆಗಳು
ಆದಷ್ಟು ರಾತ್ರಿ ಒಬ್ಬಳೆ ಒಡಾಡುವುದನ್ನು ಕಡಿಮೆ ಮಾಡಬೇಕು ಇಲ್ಲವಾದರೆ ಜನರಿರುವ ರಸ್ತೆಯಲ್ಲಿ ಓಡಾಡಬೇಕು ಇಲ್ಲವಾದರೆ ಯಾರಾದರೂ ಗೊತ್ತಿರುವವರು ಜೊತೆ ಇರಬೇಕು
ಟೀನಾರವರು ಹೇಳಿದಂತೆ ಆತ್ಮರಕ್ಶಣೆಯ ಕಲೆಯನ್ನು ರೂಡಿಸಿಕೊಳ್ಳಬೇಕು, ಜೊತೆಯಲ್ಲಿ ಪೆಪ್ಪರ್ ಸ್ಪ್ರೇ ಆಥವ ಆ ಥರಹದ ಇನ್ನೇನಾದರೂ ಇಟ್ಟುಕೊಳ್ಳಾಬೇಕು
ನಾನು ಯಾವುದೇ ಸಮಯ್ದಲ್ಲೂ ಆಟೊನಲ್ಲಿ ಅಥವ ಟ್ಯಾಕ್ಸಿಯಲ್ಲಿ ಬರುತ್ತಿದ್ದಾಗಲೆಲ್ಲಾ . ಆ ಡ್ರೈವರ್ನ ಪೋಲಿಸ್ ನಂಬರನ್ನು ನನಗೆ ತಿಳಿದವರಿಗೆ ಎಸ್. ಎಮ್ .ಎಸ್ ಮಾಡುತ್ತೇನೆ. ದಾರಿಯಲ್ಲಿ ಫೋನನ್ನಲ್ಲಿ ಮಾತಾಡುತ್ತಾ ನನಗೆ ತಿಳಿದವರು ಈ ರಸ್ತೆಯಲ್ಲಿ ಸಿಕ್ಕಿ ಹತ್ತುತ್ತಾರೆ ಎಂಬುದನ್ನು ಅವನಿಗೆ ಸೂಚ್ಯವಾಗಿ ಹೇಳುತ್ತೇನೆ. ನಂತರ ಅವನ ಜೊತೆ ಮಾತನಾಡಲಾರಂಭಿಸುತ್ತೇನೆ. ಅವನ ಜೊತೆ ಮಾತಾನಾಡುತ್ತಾ ಒಂದು ರೀತಿಯ ಅತ್ಮೀಯ ವಾತವರಣ ನಿರ್ಮಿಸುತ್ತೇನೆ ಅಂತಹ ಪರಿಸ್ಥಿತಿಯಲ್ಲಿ ಯಾವುದೇ ಜಾರಿಕೆಯ ಮಾತಾಗಲಿ , ವೈಯುಕ್ತಿಕ ವಿಷಯ ವಾಗಲಿ ನುಸುಳದಂತೆ ಎಚ್ಚರ ವಹಿಸುತ್ತೇನೆ.
ತನ್ನ ಬಟ್ಟೆ ಹಾಗೂ ತನ್ನ ನಡುವಳಿಕೆಯ ಮೇಲೆ ಗಮನ(ಎಚ್ಚರ ) ವಿರಬೇಕು. ಯಾವುದೇ ಕಾರಣಕೂ ತನ್ನ ಉಡುಪಿನಿಂದ ಅಂಗಾಂಗ ಪ್ರದರ್ಶನವಾಗಬಾರದು (ಯಾವುದೇ ಉಡುಪು ಧರಿಸಿದರೂ). ಹಾಗೂ ಎಷ್ಟೆ ಮಾತನಾಡಿದರೂ ದೈಹಿಕ ಸ್ಪರ್ಶವನ್ನು ಕಡಿಮೆ ಮಾಡಬೇಕು. (ಹೆಂಗಸರು ತಮ್ಮ ಗೆಳತಿಯರಂತೆ ತಮ್ಮ ಗೆಳೆಯರ ಮೇಲೂ ಕೈ ಹಾಕಿ ನಡೆಯುವುದನ್ನು ನಾನು ನೋಡಿದ್ದೇನೆ).
ಸಣ್ಣ ಪುಟ್ಟ ಸಹಾಯ ಡ್ರಾಪ್ ಮಾಡು ಕಾಫಿ ಕೊಡಿಸು. ತೆಗೆದುಕೊಂಡು ಬಾ ಎಂಬ ತಾವೆ ಮಾಡಬಹುದಾದಂತಹ ಕೆಲಸಗಳಿಗೆ ಗಂಡಸರ ಸಹಾಯ ಪಡೆಯುವುದು ತಪ್ಪು
ಇದನ್ನೆಲ್ಲಾ ಮಾಡಿದರೆ ಅತ್ಯಾಚಾರ ಎನ್ನುವುದೇ ಇಲ್ಲವಾಗುತ್ತವೆ ಎಂಬುದು ಸುಳ್ಳು
ಮುಖ್ಯವಾಗಿ ಗಂಡಸರಲ್ಲಿ ಹೆಣ್ಣಿನ ಬಗ್ಗೆ ಗೌರವ ಮೂಡಬೇಕು. ಅದನ್ನು ಮೂಡಿಸುವ ಕೆಲಸ ಆಗಬೇಕು ಅದು ಹೆಂಗಸರಿಂದ (ನಮ್ಮಿಂದಲೇ) ಆಗುವ ಕೆಲಸ
ಗಮನಿಸಿ . ಇಲ್ಲಿ ಯಾವುದನ್ನು ಜೆನರಲೈಸ್ಡ್ ಆಗಿ ಹೇಳಿಲ್ಲ .
Friday, May 9, 2008
ಅತ್ಯಾಚಾರ ಮತ್ತು ಕಾರಣಗಳು
Friday, May 2, 2008
ಗುರಿ
ಗುರಿ
ಬಿಡದ ಛಲದ ನಂಬಿಕೆ
ಮನದ ಹಠದ ಕೂಗಿಗೆ
ಶರಣಾಗಿ ಬಂದೆ ನಾ ನಿನಗೆ
ದೂರದಿ ಕಂಡು
ನನ್ನ ಸನಿಹ ಕರೆದು
ನಡೆದಿಹೆ ನೀ ಮುಂದು
ಪ್ರೀತಿ ಬಿಟ್ಟು, ಸ್ನೇಹ ಬಿಟ್ಟು
ನಿನ್ನರಸಿ ಬಂದೆ
ನಾನೆಲ್ಲಾ ಬಿಟ್ಟು
ಹರೆಯದಾಟ ಬೇಡ ಎಂದೆ
ಬರಿಯ ಹಣ ಒಲ್ಲೆ ಎಂದೆ
ನಿನ್ನ ತಲುಪಲೆನ್ನ ಗಮನ ಒಂದೆ
ನೀ ಬದುಕಿನರ್ಥ ನನಗೆ
ನಿನ್ನ ಹುಡುಕಿ ಮನದಿ ಮಿಡುಕಿ
ಬಾಳು ವ್ಯರ್ಥ ವಾಗದೆನಗೆ
ನೀ ಸಿಗುವ ತನಕ ಸಾಯಲಾರೆ
ನಿನ ಹಿಡಿಯದೆ ಹೋಗಲಾರೆ
ನೀನಿರದ ಎಡೆಯ ಬಯಸಲಾರೆ
ಎಲ್ಲಿಯೋ ನೀನಿರುವೆ
ಇಲ್ಲಿಯೇ ನಾನಿರುವೆ
ನಮ್ಮಿಬ್ಬರ ಮಿಲನಕಾಗೆ ನಾ ಕಾದಿರುವೆ
---
----
----
ಓ ಗುರಿ
Thursday, May 1, 2008
ಕತೆಯಾಗದ ಹುಡುಗಿ
ಆಕೆ ಈಗಷ್ಟೆ ಅರಳಿದ ಸುಂದರ ಪುಷ್ಪ. ಮುಗ್ಧತೆಯೇ ಮೈವೆತ್ತಿದ ಹುಡುಗಿ. ಪ್ರೀತಿ ಪ್ರೇಮದ ಹಂಬಲಕ್ಕೆ ಬಿದ್ದವಳಲ್ಲ. ಯಾರ ಹೃದಯದ ಬಾಗಿಲನ್ನೂ ಬಡಿದವಳಲ್ಲ. ತನ್ನ ಎದೆಯ ಕದವ ತಟ್ಟಿದವರಿಗೆ ಕದ ತೆರೆದವಳಲ್ಲ. ಕಾಲೇಜಿಗೆ ಒಂದು ಥರದ ಮಾದರಿಯಾಗಿದ್ದಳು.
ಆಕೆ ಒಮ್ಮೆ ಅವನನ್ನ ನೋಡಿದಳು ಅವನು ಅಂದರೆ ಆ ಸಿನಿಮಾದ ಹೀರೊ. ಟಿವಿಯಲ್ಲಿ ಆ ಹೀರೊನ ಹಾಡು ನೋಡಿ ಅವನ ರೂಪಕ್ಕೆ ಮನ ಸೋತಳು. ಅವನ ಕಣ್ಣ ಭಾವಕ್ಕೆ , ನರ್ತಿಸುವ ಶೈಲಿಗೆ ಮಾರು ಹೋದಳು
ಚಿತ್ರ ನೋಡಿ ಬಂದ ಮೇಲಂತೂ ಅವನದೇ ’ಧ್ಯಾನ’ವಾಯಿತು . ಅವನು ಇನ್ನೂ ಬ್ಯಾಚುಲರ್ ಎಂಬುದನ್ನು ಕೇಳಿದ ಮೇಲೆ ತಾನೆ ಅವನ ’ಮೊನಾಲೀಸ ’ ಎಂದು ತೀರ್ಮಾನಿಸಿದಳು. ಎಲ್ಲಿ ನೋಡಿದರೂ ಅವನ ಹೆಸರನ್ನೇ ಗೀಚುತ್ತಿದ್ದಳು. ಕಷ್ಟ ಪಟ್ಟು ಅವನ ಆಡ್ರೆಸ್ ಹುಡುಕಿ ಅವನಿಗೊಂದು ಪ್ರೀತಿ ತುಂಬಿದ ಪತ್ರ ಹಾಗು ತನ್ನ ಭಾವಚಿತ್ರ ಕಳಿಸಿದಳು.
ಅವನೋ ಯಾರೋ’ಹುಡುಗಾಟಕ್ಕೆ ’ ಕಳಿಸಿದ ಪತ್ರವಿರಬೇಕು ಎಂದು ಮೊದಲು ಕಡೆಗಣಿಸಿದನಾದರೂ , ನಂತರ ಭಾವಚಿತ್ರಕ್ಕೆ ಮನಸೋತನು . ಅವಳ ಪ್ರೀತಿಯ ’ಮುಂಗಾರು ಮಳೆ"ಯಲ್ಲಿ ತೋಯ್ದು ಹೋದನು . ಅವಳಿಗೆ ಮರು ಓಲೆ ಕಳಿಸಿದ . "ಚೆಲುವಿನ ಚಿತ್ತಾರ"ವೆಲ್ಲಾ ತನ್ನ ಹೃದಯ ಚೋರನು ಕಳಿಸಿದ ಪತ್ರದಲ್ಲೆ ಇದೆ ಎಂದೆನಿಸಿತು. ಪ್ರೀತಿ ಆರಂಭವಾಯಿತು. ಅಥವ ಹಾಗೆಂದುಕೊಂಡಳು.
ಒಮ್ಮೆ ಅವನನ್ನು ಭೇಟಿ ಮಾಡುವ ಇಂಗಿತ ವ್ಯಕ್ತ ಪಡಿಸಿದಳು.. ಹೀರೊ ತಥಾಸ್ತು ಎಂದ.
ಇಬ್ಬರೂ ಭೇಟಿಯಾದರು. ತನ್ನ ಮನದಾಸೆಯನ್ನು ಅವನ ಮುಂದೆ ತೋಡಿಕೊಂಡಳು. ತಾನು ಮದುವೆ ಎನ್ನುವುದಾದರೆ ನಿನ್ನನ್ನೇ ಎಂದಳು. ಅದಕ್ಕೇನು ಪುರಾವೆ ಎಂದು ಕೇಳಿದ. ತನ್ನ ಚೆಲುವೆಲ್ಲಾ ನಿನ್ನದೆ ಎಂದು ತನ್ನನ್ನು ತಾನೆ ಅರ್ಪಿಸಿಕೊಂಡಳು. ಆತನೋ ಜಾಣ ಏನನ್ನೂ ಬಾಯಿ ಬಿಡದೆ ಏನನ್ನೂ ಕೇಳದೆ ಎಲ್ಲಾ ಪಡೆದುಕೊಂಡ. ಎಲ್ಲವನ್ನೂ ಸೂರೆಹೊಡೆದ.
ಚೆಲುವೆ ತನ್ನ ಬಾಳು ಪಾವನವಾಯ್ತು ಎಂದುಕೊಂಡಳು.
ಸರಿ ಮನೆಯವರನ್ನು ಒಪ್ಪಿಸಿ ನಿನ್ನನ್ನೇ ಮದುವೆಯಾಗುತ್ತೇನೆ ಎಂದು ಹೇಳಿ ಅವಳನ್ನು ಮರಳಿ ಕಳಿಸಿದ.
ಕೊಂಚ ದಿನದಲ್ಲೇ ಆತ ಪ್ರಸಿದ್ದ ನಾಯಕನಾಗಿ ಬದಲಾದ ಅವನಿಗಾಗಿ ಕೋಟಿ ಕೋಟಿ ಸುರಿಯಲು ನಿರ್ಮಾಪಕರು ಸಾಲು ನಿಂತರು. ಸಾಲು ಸಾಲಾಗಿ ಚಿತ್ರ ಬಿಡುಗಡೆಯಾಗತೊಡಗಿದವು. ಹುಡುಗಿಯ ಕೈಗೆ ಸಿಗಲೂ ಆತ ಬಿಡುವಾಗಲಿಲ್ಲ
ಕೆಲವು ದಿನದಲ್ಲೆ ಆತನ ಮದುವೆ ಸುದ್ದಿ ಪತ್ರಿಕೆಗಳಲ್ಲಿ ಬಂತು. ಹುಡುಗಿ ಗಾಬರಿಯಾದಳು. ಹೀರೋನ ಮನೆ ಮುಂದೆ ಹೋಗಿ ಅತ್ತುಕೊಂಡಳು. ನಿಂಥರ ಎಷ್ಟೊಂದು ಹುಡುಗೀರು ಬರ್ತಾರೆ ಗೊತ್ತ. ಒಬ್ಬ ದೊಡ್ಡ ಹೀರೋ ಅಂದ್ರೆ ಅವನ ಹೆಸರು ಕೆಡಿಸೋಕೆ ಜನ ಕಾಯ್ತಾ ಇರ್ತಾರೆ ಎಂದು ಅಲ್ಲಿದ್ದ ಜನ ಅವಳನ್ನ ಓಡಿಸಿದರು.
ಮನೆಗೆ ಬಂದವಳೇ ಆಳಲೂ ಶಕ್ತಿ ಇಲ್ಲದವಳಂತೆ ಕೂತಳು . ಇನ್ನೂ ಹದಿನೆಂಟು ತುಂಬದ ವಯಸ್ಸು. ಆತ ತನ್ನವನಾಗಲಿಲ್ಲ ಎಂಬ ಬೇಗುದಿ ಒಂದೆಡೆಯಾದರೆ, ತಾನು ಯಾರವಳೂ ಆಗಲಾಗದ ದಳ್ಳುರಿ ಸುಡಲಾರಂಭಿಸಿತು. ಮುಂದೆ...........
ಆ ಹೀರೋನ ಮದುವೆ ವಿಜ್ರಂಭಣೆಯಿಂದ ಜರುಗಿತು.
ಪತ್ರಿಕೆಗಳಲ್ಲಿ ಈ ಸುದ್ದಿಯ ಜೊತೆ ಕೆಳಗಡೆ ಇಂತಹ ಹೀರೊ ಮದುವೆಯಾಗುತ್ತಿದ್ದಾನೆಂದು ಸಹಿಸದ ಹುಡುಗಿಯೊಬ್ಬಳ ಆತ್ಮಹತ್ಯೆ ಎಂಬ ಬರಹ ಕಾಣಿಸಿತು.
ಆ ಹೀರೊ " ಸಿನಿ ನಾಯಕರೂ ನಿಮ್ಮ ಹಾಗೆ ಮನುಶ್ಯರು . ಅವರೇ ನಿಮ್ಮ ಹೀರೊಗಳಲ್ಲ. ದಯವಿಟ್ಟು ಇಂಟಹ ನಿರ್ಧಾರ ತೆಗೆದುಕೊಳ್ಳಬೇಡಿ " ಎಂದು ಹುಡುಗಿಯರಿಗೆ ಕಿವಿ ಮಾತು ಹೇಳಿದ.
ಜನ ಚಪ್ಪಾಳೆ ಹೊಡೆದರು.
Tuesday, April 29, 2008
ಪ್ರೀತಿಗೆ ಸ್ನೇಹಾನ ಮರೆಸೋ ಶಕ್ತಿ ಇರುತ್ತಾ?
ಬಸ್ ಸ್ಟಾಪ್ನಲ್ಲಿ ನೆಪ ಮಾತ್ರಕ್ಕೆ ಕುಳಿತಿದ್ದರು ಆ ಇಬ್ಬರು ಸ್ನೇಹಿತೆಯರು ಬರೀ ಸ್ನೇಹಿತೆಯರೆಂದರೆ ಸಾಲದು ದೇಹ ಪ್ರಾಣ ಎಂಬತಿದ್ದರು. ಕಾಲೇಜ್ ಬಿಟ್ಟೊಡನೆ ಸೀದ ಮನೆಗೆ ಹೋಗುವ ಮಾತೆ ಅವರಲ್ಲಿರಲಿಲ್ಲ. ಬಸ್ ಸ್ಟಾಪ್ನಲ್ಲಿ ಕೂರುವುದು ಪಾರ್ಕ್ಗೆ ಹೋಗುವುದು . ದುಡ್ಡಿದ್ದರೆ ಬೇಕರಿಗೆ ಹೋಗಿ ತಿಂದುಕೊಂಡು ಮಾತಾಡುವುದು. ಮಾತಿಗೆ ಬರವೇ ಇರಲಿಲ್ಲ
ಮೂರು ಜನ್ಮಕ್ಕೆ ಸಾಲುವಷ್ಟು ಮಾತಿತ್ತೇನೊ ಅವರಲ್ಲಿ. ಇಂದೂ ಹಾಗೆ ಮಾತು ನಡೆಯುತ್ತಿತ್ತು
"ಏ ಪ್ರಿಯ ಯಾಕೆ ಸ್ವಲ್ಪ ದಿನದಿಂದ ಏನೊ ಒಂಥರ ಇದೀಯ ಏನೊ ಕಳ್ಕೊಂಡವಳ ಹಾಗೆ . ಸುಮ್ಮ್ನೆ ಕೂತ್ಕೊಂಡೀರ್ತೀಯ . ಏನು ವಿಷಯ ? ಲವ್ವಾ?"
ಪ್ರಿಯ ನಾಚಿಕೆಯಿಂದ ತಲೆಯಾಡಿಸಿದಳು
" ಏ ಕಳ್ಳಿ ಯಾರೆ ಅದು .ದಿನದಲ್ಲಿ ಮುಕ್ಕಾಲು ಪಾಲು ನಂಜತೆನೇ ಇರ್ತೀಯ . ಇದು ಹ್ಯಾಗೆ ಸಾಧ್ಯ.
ಹೋಗಲಿ ಯಾರೆ ಅವನು ನನ್ನ ಗೆಳತೀ ಮನಸನ್ನ ಹಾರಿಸಿಕೊಂಡವನು?" ಸ್ನೇಹಾಳ ಪ್ರಶ್ನೆಗೆ ಉತ್ತರಿಸಲಾರೆ ಎಂಬಂತೆ ತಲೆ ಆಡಿಸಿದಳು ಪ್ರಿಯ.
"ನನ್ನ ಹತ್ತಿರ ಮುಚ್ಚಿಡಬೇಡ . ನಂಗೆ ಹೇಳೆ ಪ್ಲೀಸ್"
ಪ್ರಿಯ ತನ್ನಲ್ಲಿದ್ದ ರೆಕಾರ್ಡ್ ಬುಕ್ ತೆಗೆದು ಅದರಲ್ಲಿದ್ದ ಲೇಬಲ್ನ ಮೇಲಿದ್ದ ಹೆಸರನ್ನು ತೋರಿದಳು.
ಹೆಸರು ನೋಡುತಿದ್ದಂತೆ ನಂಬಲಾಗದವಳಂತೆ ಅಚ್ಚರಿಯಿಂದ ಪ್ರಿಯಳನ್ನು ನೋಡಿದಳು.
ಅದು ಅವರಿಬ್ಬರ ಕ್ಲೋಸ್ ಫ್ರೆಂಡ್ ರವಿಯ ಬುಕ್ .
ಈ ಮೂವರು ಭೂಮಿಯ ಮೇಲೆ ಹುಟ್ಟಿದ್ದೇ ಈ ಸ್ನೇಹಕ್ಕಾಗಿ ಎಂಬಂತಿದ್ದರು.
ಕಾಲೇಜಿನ ಯಾವ ಮೂಲೆಯಲ್ಲಾದರೂ ಒಬ್ಬರಿದ್ದರೆ ಇನ್ನಿಬ್ಬರು ಇರುತ್ತಾರೆ ಎನ್ನುವಂತಿತ್ತು.
ಯಾರಾದರೂ ಒಬ್ಬರಿಗೆ ಯಾರಿಂದಲೋ ನೋವಾಗಿದೆ ಎಂದರೆ ಮೂರು ಜನ ಜಗಳಕ್ಕೆ ರೆಡಿ.
ಯಾರೋ ಒಬ್ಬರು ರಜಾ ಹಾಕಿದರೆ ಇನ್ನಿಬ್ಬರಿಗೆ ಕ್ಲಾಸ್ ಬೋರು ಕೂಡಲೆ ಕ್ಲಾಸ್ನಿಂದ ಮಾಯವಾಗುತ್ತಿದ್ದರು.
ಎಲ್ಲರೂ ರವಿಗೆ ರೇಗಿಸುತ್ತಿದ್ದರು. ಇಬ್ಬರು ಹುಡುಗಿಯರನ್ನು ಪಟಾಯಿಸಿಬಿಟ್ಟಿದ್ದೀಯಾ ಅಂತ.
ಆದರೆ ರವಿ ಇವರಿಬ್ಬರ ಬಗ್ಗೆ ಎಂದೂ ಅಂತಹ ಭಾವನೆಯನ್ನ ವ್ಯಕ್ತ ಪಡಿಸಿರಲಿಲ್ಲ.
" ಹೆಯ್ ಪ್ರಿಯ ಆರ್ ಯು ಶ್ಯೂರ್ ? ಇದು ರವಿಗೆ ಗೊತ್ತಾ?"
"ಇಲ್ಲಾ ಕಣೆ ಅವನಿಗೆ ಹೇಗೆ ಹೇಳಲಿ ಅಂತ ತಿಳೀತಿಲ್ಲ. ಅವನು ಯಾವತ್ತು ನನ್ನ ಜೊತೆ ಆ ಥರ ಬಿಹೇವ್ ಮಾಡಿಲ್ಲ . ಅವನಿಗೆ ಈ ವಿಷಯ ಹೇಳೊ ಕೆಲಸಾನ್ ನೀನೆ ಮಾಡಬೇಕು. ಪ್ಲೀಸ್ ಕಣೇ"
"ಸರಿ ಕಣೆ ಲೆಟ್ ಮಿ ಟ್ರೈ."
" ಪ್ಲೀಸ ಸ್ನೇಹ ನಂಗೆ ಅವನಲ್ಲದೆ ಬೇರೆ ಯಾರು ಹಿಡಿಸ್ತಾ ಇಲ್ಲ. ಊಟ ತಿಂಡಿ ಸಹಾ ಬೇಡ ಅನ್ನಿಸ್ತಿದೆ. ನೀನವನ್ನ ಒಪ್ಪಿಸಲೇ ಬೇಕು"
"ಆಯ್ತು " ಜೋರಾಗಿಯೆ ಕಿರುಚಿದಳು
ಅಷ್ಟ್ರಲ್ಲಿ ಗಾಡಿ ಬಂದು ನಿಂತ ಶಬ್ಧವಾಯಿತು . ರವಿ ಬಂದು ನಿಂತಿದ್ದ.
"ಏನ್ರೇ ಇನ್ನೂ ಮೀಟಿಂಗ್ ಮುಗ್ದಿಲ್ಲವಾ, ನಡೀರಿ ಟಿಕೆಟ್ ತಂದಿದೀನಿ ಹೋಗೋಣಾ"
"ರವಿ ಇವತ್ತು ರಾಗಿಗುಡ್ಡ ದೇವಸ್ಥಾನಕ್ಕೆ ಹೋಗೋಣ. ಫಿಲ್ಮ್ ಬೇಡ " ಸ್ನೇಹ ನುಡಿದಳು.
" ಯಾಕೆ ನೆನ್ನೆ ತಾನೆ ಹೇಳ್ತಿದ್ರಿ . ಹೋಗೋಣ ಅಂತ ಇದೇನು ಹೊಸಾ ಆಟ?"
"ಪ್ಲೀಸ್ ಕಣೋ . ಟಿಕೆಟ್ನ ಮಹೇಶಗೆ ಕೊಟ್ಬಿಡು ಅವನು ಅವನ ಫ್ರೆಂಡ್ ನೋಡ್ಕೋತಾರೆ."
"ಆಯ್ತು ಅದಿರ್ಲಿ ಯಾಕೆ ಪ್ರಿಯಂಗೆ ಏನಾಯಿತು ಒಂಚೂರು ಬಾಯೆ ಬಿಡ್ತಿಲ್ಲ"
"ಅದನ್ನೆ ಮಾತಾಡ್ಬೇಕು . ನೀನು ಹಿಂದೆ ಬಾ ನಾವು ಆಟೋನಲ್ಲಿ ಹೋಗ್ತೀವಿ"
"ಸರಿ"
ದೇವಸ್ಥಾನದ ಹತ್ತಿರ
ಪ್ರಿಯ ಒಂದೆಡೆ ಕುಳಿತಿದ್ದಳು. ಸ್ವಲ್ಪ ದೂರದಲ್ಲಿ ಸ್ನೇಹ ಹಾಗು ರವಿಯ ಮಾತು ಕತೆ ನಡೆಯುತ್ತಿತು
ರವಿ " ಸ್ನೇಹ ಇದೇನಿದು ಹೊಸ ನಾಟಕ ನಿಮ್ಮಿಬ್ಬರದು. ನಾನು ಯಾವತ್ತು ಪ್ರಿಯನ್ನಾಗಲಿ ನಿನ್ನಾಗಲಿ ಆ ದೃಷ್ಟಿನಲ್ಲಿ ನೋಡಿಲ್ಲ. ತಮಾಷೆ ಮಾಡಬೇಡ"
"ಇಲ್ಲ ನಾನು ತಮಾಷೆ ಮಾಡ್ತಿಲ್ಲ . ನೋಡು ಈ ಮಾತನ್ನು ಅವಳ ಮುಂದೆ ಆಡಬೇಡ. ಏನಾಗಿದೆಯೋ ಪ್ರಿಯಾಗೆ ಒಳ್ಳೆ ಗೊಂಬೆ ಥರಾ ಇದ್ದಾಳೆ . ಬೇರೆ ಹುಡುಗರೆಲ್ಲಾ ಅವಳ ಹಿಂದೆ ಬೀಳ್ತಾರೆ . ಅಂತಹದ್ರಲ್ಲಿ ನೀನು. ಹ್ಯಾಗೂ ನಾವೆಲ್ಲಾ ಒಂದೆ ಕ್ಯಾಸ್ಟ್. ಇನ್ನೇನಪ್ಪ ಯೋಚನೆ."
" ಸ್ನೇಹಾ ಅದು................"
"ಅದೂ ಇಲ್ಲ ಇದೂ ಇಲ್ಲಾ. ನೀನೀಗ ಪ್ರಿಯ ಹತ್ರ ಹೋಗಿ ಐ.ಲೌ. ಯು ಅಂತ ಹೇಳ್ತೀಯ ಸರೀನಾ . ಹೋಗೊ"
ಸ್ನೇಹ ಅಲ್ಲಿಯೇ ನಿಂತಳು. ರವಿ ಪ್ರಿಯಾಳ ಬಳಿ ಹೋಗಿ ಹೇಳಿದ . ಪ್ರಿಯಾಳ ಮುಖ ಅರಳಿತು.
ಸ್ನೇಹಾಳ ಮನಸಲ್ಲಿ ಏನೂ ಒಂಥರ ಹೇಳಲಾರದ ನೋವು. ಯಾಕೆ ಅಂತ ತಿಳಿಯಲಿಲ್ಲ.
----------------------------------------------------
ಮಾರನೆಯ ದಿನ
" ಅಯ್ಯೊ ಪಾಪ ಜೀವ ಹೊರಟು ಹೋಗಿದೆ ನೋಡಪ್ಪ ಪಾಪ ಬರಿ ದೇಹ ಮಾತ್ರ ಕ್ಲಾಸ್ನ್ನಲ್ಲಿ ಕೂತಿದೆ." ಕವಿತಾ ರೇಗಿಸುತ್ತಿದ್ದಳು .
ಅವತ್ತು ಕಾಲೇಜಿಗೆ ಬಂದಾಗಿನಿಂದ ಮೊದಲ ದಿನ ಸ್ನೇಹ ಒಂಟಿಯಾಗಿ ಕುಳಿತಿದ್ದಳು. ರವಿ ಪ್ರಿಯ ಅಂದು ಕ್ಲಾಸ್ಗೆ ಚಕ್ಕರ್ ಹಾಕಿ ಎಲ್ಲೊ ಹೋಗಿದ್ದರು.
"ಏನೆ ಸ್ನೇಹ ನೀನೇನೊ ಬ್ರೋಕರ್ ಕೆಲಸ ಬೇರೆ ಮಾಡಿದಿಯಂತೆ. ಇವಾಗ ಎಲ್ಲಿ ನಿನ್ನ ಪ್ರಾಣ ಸ್ನೇಹಿತರುಗಳು ಪ್ರಾಣ ತೆಕ್ಕೊಂಡು ಹೋಗಿಬಿಟ್ಟರಾ."ಕವಿತಾಳ ವ್ಯಂಗ್ಯ ಮುಂದುವರಿಯುತಿತ್ತು
" ಕವಿತಾ ಪ್ಲೀಸ್ ಶಟ್ ಅಪ್ "
ಕ್ಲಾಸ್ ನಲ್ಲಿ ಕೂರಲಾರದೆ ಹೊರಗೆ ಬಂದಳು ಜೀವನದಲ್ಲಿ ಮೊದಲಬಾರಿಗೆ ಒಂಟಿ ಎಂಬ ಭಾವನೆ ಬಂದಿತು.
ಅಂದಿನಿಂದ ರವಿ ಪ್ರಿಯ ಹೊರಗಡೆ ಹೋಗುವುದು . ಸ್ನೇಹಳನ್ನು ಅವಾಯ್ಡ್ ಮಾಡುವುದು ನಡೆಯಿತು.
ಸ್ನೇಹಾ ಈಗ ಇದಕ್ಕೆ ಅಭ್ಯಾಸವಾಗಿ ಹೋದಳು.
ಆದರೆ ಅವಳ ಮನಸಲ್ಲಿ ಮೂಡಿದ ಪ್ರಶ್ನೆಯೊಂದಕ್ಕೆ ಉತ್ತರ ಸಿಗಲ್ಲಿಲ್ಲ.
ಪ್ರೀತಿಗೆ ಸ್ನೇಹಾನ ಮರೆಸೋ ಶಕ್ತಿ ಇರುತ್ತಾ?
ಆ ಪ್ರಶ್ನೆಗೆ ಉತ್ತರ ಹೇಳಲಾಗುವುದಾ
Saturday, April 26, 2008
ಗೆಳೆಯನಲ್ಲದ ಗೆಳೆಯನಿಗೆ
ಗೆಳೆಯನಲ್ಲದ ಗೆಳೆಯನಿಗೆ
ಬಾಳಿನುದ್ದಕ್ಕೂ ನಿನ್ನ ಜೊತೆಗಿರುವೆ
ಎಂದ ನೀ ಈಗ ಎಲ್ಲಿರುವೆ
ಬಾಳ ಎಲ್ಲೆಯಲಿ ನನ್ನ ಕಾವಲಾಗಿ
ಜೀವನದ ಆಸರೆಯಾಗಿ
ಹೃದಯದ ಮಾತಾಗಿ
ಜೊತೆ ಹೆಜ್ಜೆ ಹಾಕುವೆ ಎಂದ ನೀ
ಹೇಗಿರುವೆ ಈಗ ಬೇರಾಗಿ
ಪ್ರತಿ ಹೆಜ್ಜೆಗೂ ನಿನ್ನ ಹಿತ ನುಡಿ
ಕಾವಲಾಗಿತ್ತು ನನ್ನ ದಿನವಿಡೀ
ಹೊರಟೆ ನೀ ಹೇಳದೆ
ಭವಬಂಧನ ಬೇಡೆಂದೆ
ನನ್ನೊಂದು ಮಾತು ಕೇಳದೆ
