Sunday, May 8, 2011

ಶಾಪ ವಿಮೋಚನೆಯಾಗದ ಅಹಲ್ಯೆಯರು

ರಾಮಾಯಣದ ಸೀತಾ ಸ್ವಯಂವರದ ನಾಟಕದ ತಾಲೀಮು ನಡೆಯುತ್ತಿತ್ತು.
ಅದರಲ್ಲಿ ಬರುವ ಅಹಲ್ಯಾ ಶಾಪ ವಿಮೋಚನೆಯ ಪ್ರಸಂಗವನ್ನೂ ವೇದಿಕೆಯಮೇಲೆ ತರೋಣ ಎಂದು ಮೇಡಮ್ ಹೇಳಿದ್ದರು, ಜೊತೆಗೆ ನಾಟಕದ ಪಾತ್ರಗಳಿಗೆ ಆಯ್ಕೆ ನಡೆಯುತ್ತಿತ್ತು.

"ಗೀತಾ ಅಹಲ್ಯಾ ಪಾತ್ರ ನೀನೇ ಮಾಡಬೇಕು ." ಮೇಡಂ ನನ್ನನ್ನು ಈ ಪಾತ್ರಕ್ಕೆ ಕರೆದಾಗ ನಾನು ಕಕ್ಕಾಬಿಕ್ಕಿ, ಜೊತೆಗೆ ಒಮ್ಮೆಗೆ . ಮಾಡಬಾರದೆನಿಸಿತು
"ಮೇಡಂ ನಾ.............ನು ............ಈ ಪಾರ್ಟ್ ಮಾಡಲ್ಲ. ........." ಹಿಂಜರಿಕೆಯಿಂದಲೇ ನುಡಿದೆ.

"ಯಾಕೆ ಗೀತಾ "? ನನ್ನತ್ತಲೇ ತೀಕ್ಷ್ಣವಾಗಿ ನೋಡುತ್ತಾ

"ಮೇಡಂ iam not happy with Ahalya's charactor. ತುಂಬಾ ಸಲ ಅನ್ಕೂಂಡಿದ್ದೀನಿ ಯಾಕೆ ಈ ಪಂಚ ಮಹಾ ಕನ್ನಿಕೆಯರ ಹೆಸರಲ್ಲಿ ಅಹಲ್ಯಾ ಹೆಸರು ಸೇರಿದೆ ಅಂತ?"
"ಯಾಕಮ್ಮಾ"? ಮತ್ತೆ ಪ್ರಶ್ನೆ ಎಸೆದರು.
" ಹಾಗಲ್ಲ ಮೇಡಂ ಗಂಡ ಇರದಿದ್ದಾಗ ಮತ್ತೊಬ್ಬನ ಜೊತೆ ಸಂಬಂಧ ಹೊಂದಿದವಳು. ಅಸಲಿಗೆ ಆ ಕಥೆಯೇ ಬೇಕಿರಲಿಲ್ಲ .ರಾಮನ

ಔನ್ನತೆಯನ್ನ ಎತ್ತಿ ತೋರೋದಿಕ್ಕೆ ಈ ಕತೆ ಸೇರಿಸಿದ್ದಾರೆ ಅಷ್ಟೆ.
"ಸರಿ . ಆಯ್ತು, ನಿನಗೆ ಯಾವ ಪಾತ್ರ ಬೇಕೋ ಅದನ್ನೇ ಚೂಸ್ ಮಾಡು ಆದರೂ ಪಾತ್ರಕ್ಕಿಂತ ಪಾತ್ರಧಾರಿಯ ಆ ಪಾತ್ರದಲ್ಲಿ ಹೇಗೆ ಇನ್‌ವಾಲ್ವ್ ಆಗ್ರಾನೆ ಅನ್ನೋದು ಮುಖ್ಯ. ಮತ್ತೆ ಪುರಾಣದಲ್ಲಿ ಕೇಳಿದ ಕಥೆಯನ್ನ ಆ ನೆಲೆಯಲ್ಲಿಯೇ ನೋಡುವುದಕ್ಕಿಂತ ಒಂದು ವಿಭಿನ್ನ ನೆಲೆಯಲ್ಲಿ ನೋಡಿದರೆ ಪಾತ್ರ ಇಂಟರೆಸ್ಟಿಂಗ್ ಆಗಿರುತ್ತೆ. ಅಹಲ್ಯಾ ಜೀವನದಲ್ಲಿ ನಿಜಕ್ಕೂ ಏನು ನಡೆದಿರಬಹುದು ಅನ್ನೋದನ್ನ ಯೋಚಿಸಿದರೆ ಆ ಪಾತ್ರ ನಿಜಕ್ಕೂ ತುಂಬಾ ಕಾಂಪ್ಲಿಕೇಟೆಡ್ ಅನ್ಸುತ್ತೆ. "ಮೇಡ್ಂ ಒಂದೇ ಸಲಕ್ಕೆ ಒಪ್ಪಿ ಜೊತೆಗೇ ನನ್ನ ಮನಸಲ್ಲಿ ಅಲೆಯನ್ನು ಎಬ್ಬಿಸಿದರು.

ಯಾಕೋ ಅವರ ಮನಸು ಸ್ವಲ್ಪ ಗಂಭೀರವಾಯ್ತೆನಿಸಿತು.
ಅವರಿಗೆ ಹಾಗೆಯೇ ಪಾತ್ರಗಳಲ್ಲಿ ತಲ್ಲೀನರಾಗುವ ಮನಸು..

"ರೇವತಿ ಯಾರ್ ಯಾರಿಗೆ ಯಾವ ಯಾವ ಪಾರ್ಟ್ ಬೇಕು ಅನ್ನೋದನ್ನ ನೀನೆ ಪಟ್ಟಿ ಮಾಡಿ ನನಗೆ ತಂದುಕೊಡು. ನಾನೀಗ ಹೊರಡ್ತೀನಿ"
ಮೇಡಮ್ ಮತ್ತೊಮ್ಮೆ ನನ್ನತ್ತ ನೋಡಿ ಹೊರಟೇ ಹೋದರು.

ಯಾವ ಬೇರೆ ನೆಲೆಯಲ್ಲಿ ಯೋಚಿಸಲೂ ಸಾಧ್ಯವಾಗಲಿಲ್ಲ. ನಿಜಕ್ಕೂ ಅಹಲ್ಯಾ ನನ್ನನ್ನ ಕಾಡತೊಡಗಿದಳು.
ಕಾಲೇಜಿನ ಅವಧಿ ಮುಗಿದ ಮೇಲೆ ಮೇಡಮ್ ಅನ್ನೇ ಕೇಳಲು ಸ್ಟಾಫ್ ರೂಮಿಗೇ ನಡೆದೆ.
"ಮೇಡಮ್ ನಾನು ಮತ್ತೆ ತೊಂದರೆ ಕೊಡ್ತಾ ಇದ್ದೇನೆ. ಸಾರಿ"
"ಇಲ್ಲ ಹೇಳು ಗೀತಾ............"
"ನನಗೆ ಮತ್ತೆ ಯಾವ ಹಿನ್ನೆಲಯಲ್ಲಿ ಯೋಚಿಸಲೂ ಸಾದ್ಯವಾಗ್ತಿಲ್ಲ. ಆದರೆ ಈ ಪಾತ್ರಾನ ಅರ್ಥ ಮಾಡಿಕೊಂಡ ನಂತರ ನನಗೆ ಇಷ್ಟವಾದಲ್ಲಿ ಆ ಪಾತ್ರಕ್ಕೆ ನ್ಯಾಯ ಒದಗಿಸಲು ಸಾಧ್ಯ ಅನ್ಸುತ್ತೆ. ಅದನ್ನ ಅರ್ಥ ಮಾಡಿಸೋಕೆ ನಿಮ್ಮಿಂದ ಮಾತ್ರ ಅದು ಸಾಧ್ಯಾ"

ಮೇಡಂ ಕೈಲಿದ್ದ ಪೆನ್ನನ್ನೇ ನೋಡತೊಡಗಿದರು. ಸ್ವಲ್ಪ ಹೊತ್ತು. ............. ಹಾಗೆ ಕುರ್ಚಿಯಮೇಲೆ ಒರಗಿದವರು ಕಣ್ಣುಮುಚ್ಚಿದರು



"ಗೀತಾ ಅಹಲ್ಯಾ ಅನುಪಮ ಚೆಲುವೆ. ಬ್ರಹ್ಮನ ಮಾನಸ ಪುತ್ರಿ ಅಂತಾರೆ. ಆದರೆ ಅದನ್ನ ಪುರಾಣದ ಹಿನ್ನೆಲೆ ಬಿಟ್ಟು ಬೇರೆಯಾಗಿ ನೋಡಿದರೆ ಅವಳು ಖಂಡಿತಾ ರಾಜ ಪುತ್ರಿನೆ ಆಗಿರುತ್ತಾಳೆ. ಅಂತಹ ಚೆಲುವೆ ಈ ಗೌತಮ ಮುನಿಯ ಕಣ್ನಿಗೆ ಬಿದ್ದಿರ್ತಾಳೆ. ಮುನಿಗಳಾದರೇನು ಅವರೂ ಗಂಡಸರಲ್ಲವೇ. ಚೆಲುವಿನದೆಲ್ಲಾ ತನಗೆ ಬೇಕೆಂಬ ಅಹ್ಂ. ಡಿಮ್ಯಾಂಡ್ ಮಾಡುತ್ತಾನೆ
ಮೊದಲೇ ಮುನಿ . ಮುನಿದರೆ ಶಾಪ ಕೊಟ್ಟಾನೆಂಬ ಭಯದಲ್ಲಿ ರಾಜ ಈ ಅರಗಿಣಿಯನ್ನ ಆ ಸದಾ ಕಾಡಲ್ಲಿ ಅಲೆದಾಡುವ ಈ ಗೌತಮರಿಗೆ ಕೊಡುತ್ತಾನೆ.ಮಗಳನ್ನು ನಿನಗೆ ಇಷ್ಟಾ ಇದೆಯಾ ಇಲ್ಲವೇ? ಅನ್ನೋದು ಊಹೂ ........... ಕೇಳಿರೊಲ್ಲ........................"

ಒಂದು ಕ್ಷ್ಗಣ ಮೇಡಮ್‌ನ ವಾಯ್ಸ್ ಅರ್ಥವಾಗದಂತೆ ಬದಲಾಯ್ತು. ಆದರೆ ಅದಕ್ಕಿಂತ ಮೊದಲು ನಾನು ಆ ಕಥೆಯಲ್ಲಿ ತೇಲುತ್ತಿದ್ದೆ

ಅಹಲ್ಯಾಳ ಸ್ಥ್ತಿತಿ ಯನ್ನು ಕಲ್ಪಿಸಿಕೊಳ್ಳತೊಡಗಿದೆ, ಸುಂದರಿ ಸುಕುಮಾರಿ ಈ ಒರಟು ಮುಖದ ಗಡ್ಡದಾರಿ ಜೊತೆ ಸಂಸಾರ ನಡೆಸುವ ಸ್ಥಿತಿಯನ್ನು ನೆನೆಸಿಕೊಂಡು ನಡುಗುವುದನ್ನ ಚಿತ್ರಿಸಿಕೊಳ್ಳತೊಡಗಿದೆ.

ಆಗಲೆ ಮೇಡ್ಂ ಮಾತು ನಿಲ್ಲಿಸಿದ್ದು ಗೊತ್ತಾಯ್ತು

"ಮೇಡಂ..................."
ಎಚ್ಚರಿಸಿದೆ

"ಹೌದು ಗೀತ ........ಈ ದೇಶದಲ್ಲಿ .......................... ಹೆಣ್ಣಿಗೆ ಪೂಜ್ಯ ಸ್ಥಾನ ಕೊಟ್ಟಿದ್ದಾರೆ ನಿಜ ಆದರೆ ಅವಳ ಭಾವನೆಗಳನ್ನು ಗೌರವಿಸುವುದಿಲ್ಲ, ಅನಿಸಿಕೆಗೆ ಬೆಲೆಯೂ ಇಲ್ಲ. ಇಂತಹ ದೇಶದಲ್ಲಿ ಹುಟ್ಟಿದ್ದ ... ಆಹಲ್ಯಾ ಳಾನ್ನು ಒಂದು ಆಶ್ರಮಕ್ಕೆ ತಂದು ಬಿಡುತ್ತಾನೆ ಗೌತಮ. ಕಾಡಲ್ಲಿ ಸದಾ ಇದ್ದು, ಹೆಣ್ನಿನ ನವಿರು ಭಾವನೆಗಳಿಗಿಂತ ತನ್ನ ಅಗತ್ಯಗಳನ್ನು ತಣಿಸಿಕೊಳ್ಳುವುದರಲ್ಲಿಯೇ ತೊಡಗಿರೋ ಆ ಗೌತಮನಿಂದ ಹೆಣ್ಣಿಗೆ ಸಹಜವಾಗಿ ಬೇಕಾದ ಮೆಚ್ಚುಗೆ, ಗೌರವ, ಕಾಳಜಿ, ಪ್ರೇಮ ಇವುಗಳನ್ನ ಹೇಗಾದರೂ ನಿರೀಕ್ಷಿಸಿಕೊಳ್ಳುತ್ತಾಳೆ ಹೇಳು ಆ ಅಹಲ್ಯಾ?
ಒಂಟಿಯಾಗಿ ಇರಬೇಕು ಇದ್ದಕ್ಕಿದ್ದಂತೆಯೇ ಎಲ್ಲೋ ಹೋಗಿಬಿಡುವ ಗಂಡ, ವಾರಾನುಗಟ್ಟಲೇ ಒಬ್ಬಳೇ, ಪುಂಡರಿಂದ ರಕ್ಸಿಸಿಕೊಳ್ಳಬೇಕು,
ಜೊತೆಗೇ ಒಂಟಿತನ.......................... ನಿನಗೆ ಅರ್ಥವಾಗಲ್ಲ ಗೀತ ಅದು ಬಹಳ ಕ್ರೂರ . ಅದರಲ್ಲೂ ಹೆಣ್ಣಿಗೆ ಮಾತು ತನ್ನ ಭಾವನೆಗಳನ್ನ ದುಗುಡಾನ, ಹತಾಶೆನಾ ಕೋಪಾನ ಪ್ರಕಟಿಸೋ ಸಾಧನ
ಅಂತಹ ಮಾತು ಆವಳಿಗೆ ಸಿಗಲಿಲ್ಲ ಭಾವನೆಗಳನ್ನುಹಂಚಿಕೊಳ್ಳಲು ಅವಳಾದರು ಯಾರ ಮೊರೆ ಹೋಗುತ್ತಾಳೆ ಹೇಳು.
ಕಿವಿಯಾಗಬೇಕಾದ ಗಂಡ ಕಿವಿ ಇದ್ದೂ ಕಿವುಡಾಗಿದ್ದ, ಅಂತಹ ಸುಂದರ ಹೆಣ್ಣನ್ನು ಹೊಗಳಲಾಗದೆ ಬಾಯಿದ್ದ್ಡೂ ಮೂಕನ ಸಮನಾಗಿದ್ದೆ.
ಹೆಣ್ಣನ್ನು ಪಂಜರದ ಗಿಣಿಯಂತೆ ಕೂಡಿಹಾಕಿಹೋಗುವುದಷ್ಟೇ ಅಲ್ಲ ಅವಳ ಮಾತಿಗೆ ಕಿವಿಯಾಗಿ,ಪ್ರತಿಮಾತಿಗೆ ಪ್ರೀತಿ ಸುರಿಸಬೇಕು ಎನ್ನುವ ಆ ಹೆಣ್ಣು ಮನಸು ಆ ಗೌತಮನ ಗಂಡು ಬುದ್ದಿಗೆ ಅರ್ಥವಾಗಲೇ ಇಲ್ಲ"

ಮೇಡಮ್ ತುಂಬಾ ಭಾವುಕರಾಗಿದ್ದಂತೆ ಕಂಡು ಬಂದರು.
ವಯಸಿನ ಪ್ರಭಾವವೋ ಏನೋ ಸುಸ್ತಾದಂತೆ ಕಂಡು ಬಂದರು. ಕುರ್ಚಿಯಿಂದ ಎದ್ದು ಕಿಟಕಿಯತ್ತ ನೋಡತೊಡಗಿದರು

"ಅಂತ ಆಹಲ್ಯೆಗೆ , ಚೈತನ್ಯದ ಚಿಲುಮೆಯಂತಹ ಇಂದ್ರ ಬೆಳಕಾಗಿ ಕಂಡಿದ್ದರಲ್ಲಿ ಆಶ್ಚರ್ಯವೇನಿರಲಿಲ್ಲ. ಆತನೂ ತನ್ನ ಕಾರ್ಯ ಸಾಧ್ಯಕ್ಕಾಗಿಯೇ ಬಂದಿದ್ದರೂ ಅವನಪ್ರೇಮ ಸುಳ್ಳಾಗಿದ್ದರೂ ಅವನ ನಡೆ ನುಡಿಯಲ್ಲಿ ಪ್ರೀತಿಯನ್ನ ತೋರಿಸಿದ, ಅವಳನ್ನು ಹೆಣ್ಣಾಗಿಸಿದ, ಮೆಚ್ದುಗೆಯ ಹೊನಲುಹರಿಸಿದ, ಅಹಲ್ಯೆ ಕರಗಿದಳು............. ಅವಳ ಸ್ಥಾನದಲ್ಲಿ ಯಾವುದೇ ಸಾಮಾನ್ಯ ಹೆಣ್ಣಿದ್ದರೂ ಹೀಗೆ ಆಗುತ್ತಿತ್ತು................... ಅಂತಹ ವ್ಯಕ್ತಿಯಿಂದ ಅಲ್ಪ ಸಮಯವಾದರೂ ನೆಮ್ಮಧಿ ಸುಖ ಸಿಗುತ್ತಿತ್ತು......................... "
ಯಾಕೋ ಮಾತಾಡಿ ಆ ಮಾತಿನ ಓಘವನ್ನು ಕೆಡಿಸಲು ಮನಸು ಬರಲಿಲ್ಲ
"ಆದರೆ ಕೊನೆಗೆ ಗೌತಮನಿಗೆ ಇದು ತಿಳಿದೇ ಹೋಯ್ತು. ಯಾವ ಗಂಡನಾದರೂ ಸುಮ್ಮನೆ ಇರುವುದಿಲ್ಲ ಶಾಪ ಕೊಟ್ಟ. ಕಲ್ಲಾಗಿ ಹೋಗು ಅಂತ ಅದು ಕಥೆಯ ಪ್ರಕಾರ. ನನ್ ಪ್ರಕಾರ ಅಹಲ್ಯೆಯೇ ಕಲ್ಲಿನಂತಾಗಿಹೋದಳು, ಗಂಡನಿಗೆ ಮೋಸ ಮಾಡಿದ ಗಿಲ್ಟ್ ಅವಳನ್ನುಕಾಡತೊಡಗಿದೆ. ಹಾಗಾಗಿ ನಿರ್ಲಿಪ್ತಳಂತೆ ಇದ್ದುಬಿಟ್ಟಿದ್ದಾಳೆ. ಅವಳನ್ನು ಸರಿ ಮಾಡಲು ರಾಮನೇ ಬರಬೇಕಾಯ್ತು"
ನನ್ನೆಡೆಗೆ ತಿರುಗಿದರು.
" ನಿಜ ಹೇಳಲಾ ನಮ್ ಸುತ್ತಾ ಮುತ್ತಾನೆ ಎಷ್ಟೊಂದು ಅಹಲ್ಯೆರಿದ್ದಾರೆ. ಕಲ್ಲಾಗಿ ಹೋಗಿದ್ದಾರೆ. ಆದರೆ ಅವರಿಗೆ ಜೀವ ಕೊಡಲು ರಾಮ ಬರಲೇ ಇಲ್ಲ, ರಾಮ ಬರುವುದೇ ಇಲ್ಲ. ಹಾಗಾಗಿ ಆ ಅಹಲ್ಯೆಯರ ಪ್ರತಿಮೆಗಳು ಸಜೀವಗೊಳ್ಳುತ್ತಲೆ ಇಲ್ಲ......................... ಅವರೆಲ್ಲಾ ಶಾಪವಿಮೋಚನೆಯಾಗದ ಅಹಲ್ಯೆಯರು. ಅಹಲ್ಯೆಯೇ ನಮ್ಮ ದೇಶ ಹೆಣ್ಣಿನ ಭಾವಾಭಿವ್ಯಕ್ತಿಗೆ ಒಂದು ಪ್ರತಿಮೆಯಾಗಿದ್ದಾಳೆ ............... "ಮೇಡಮ್ ಕಣ್ಣಿನ ಅಂಚಿನಲ್ಲಿ ನೀರು ಜಿನುಗುತ್ತಿತ್ತು.
ಯಾವುದೋ ಪ್ರಪಂಚದಲ್ಲಿ ಮುಳುಗಿದರು ಎಂದೆನಿಸುತ್ತದೆ. ಅವರನ್ನು ಡಿಸ್ಟರ್ಬ್ ಮಾಡಲು ಹೋಗಲಿಲ್ಲ

ಏನೂ ಮಾತಾಡದೆ ಹೊರಗಡೆ ಬಂದೆ. ರೇವತಿಗೆ ಕರೆ ಮಾಡಿದೆ,
"ರೇವತಿ. ಅಹಲ್ಯಾ ಪಾತ್ರಕ್ಕೆ ನಾನು ರೆಡಿ" ಅಂದೆ

ಮೇಡಮ್‌ನ ಮೊಗ ನೆನೆಸಿಕೊಳ್ಳಲು ಪ್ರಯತ್ನಿಸಿದೆ, ಏಕೋ ಅವರ ಮೊಗ ಶಿಲಾಪ್ರತಿಮೆಯಾದ ಅಹಲ್ಯಾಳಂತೆ ಮೂಡತೊಡಗಿತು................


Saturday, April 30, 2011

ಕನಸು- ನೆನಕೆಗಳು -------ನನಸುಗಳು- ವಾಸ್ತವ

ಆ ಕ್ಷಣದ ಕಾಯುವಿಕೆಯಲ್ಲೂ ಎಷ್ಟೊಂದು ಸಂತಸವಿದೆ ಅನ್ನಿಸಿತು.
ಹೌದು , ಆವತ್ತು ಅಮ್ಮನ ಬಳಿಯಲ್ಲಿ ತನ್ನ ಅವನ ಪ್ರೀತಿಯ ಬಗ್ಗೆ ಹೇಳಿದ್ದೇ ಬಂತು, ಸಿಡುಕು ಮೋರೆ ಹೊತ್ತು ಅಮ್ಮ ಅಪ್ಪನ ಕಿವಿ ಕಚ್ಚಿ ಅಪ್ಪ ತನ್ನನ್ನ ದುರುದುರು ನೋಡಿ, ಸ್ವಲ್ಪ ಹೊತ್ತಿನಲ್ಲಿಯೇ ಕಿರುನಗೆ ನಕ್ಕು
"ಹೋಗಲಿ ಬಿಡು ಅವಳೇನು ಬೇರೆಯವರನ್ನ ಪ್ರೀತಿಸಲಿಲ್ಲವಲ್ಲ. ಅವನೂ ನಮ್ಮ ಜಾತೀನೆ, ಜೊತೆಗೆ ಒಳ್ಳೆ ಕೆಲಸದಲ್ಲಿ ಇದ್ದಾನೆ, ನಮ್ಮಕೆಲಸ ಹಗುರ ಮಾಡಿದಳು ಬಿಡು "ಎಂದು ನುಡಿದಾಗ ಸ್ವರ್ಗಕ್ಕೆ ಮೂರೇ ಗೇಣು
ಅತ್ತ ಅವನೂ ಫೋನ್ ಮಾಡಿದ್ದ
"ಶೀತಲ್ ನಮ್ಮ ಮನೆಯಲ್ಲೂ ಒಪ್ಪಿದರು ಕಣೇ, ಇನ್ನು ಮುಂದೇ ಬರೀ ಕನಸುಗಳ ಜಾತ್ರೇ, ಆ ಜಾತ್ರೆಯ ದೇವಿ ನೀನೆ, ನಿನ್ನ ಹೊತ್ತ ಪೂಜಾರಿ ನಾನೇ ಅಲ್ಲ್ವವೇನೇ?"
ಅಲ್ಲಿಯವರೆಗೆ ಇರದ ನಾಚಿಕೆ ದ್ವನಿಯಲ್ಲಿ ಬಂದುಬಿಟ್ಟಿತ್ತು
"ಹೂ " ಎಂದಷ್ಟೇ ಉತ್ತರಿಸಿದ್ದೆ
"ಆಹಾಹ ಎಷ್ಟೊಂದು ನಾಚಿಕೆ ಬಂದು ಬಿಟ್ಟಿದೆ ನನ್ನರಗಿಳಿಗೆ"ಛೇಡಿಸಿದ್ದ

ಮಾತಾಡಿರಲಿಲ್ಲ.
ಕನಸಿನ ಕೋಟೆಯ ಬಾಗಿಲ ಕೀಲಿ ಕೊಟ್ಟಂತಾಗಿತ್ತು,
ಆ ಕೋಟೆಯಲ್ಲಿ ನಾನು ಅವನು , ಅವನು ಮತ್ತೆ ನಾನು , ಕೇವಲ ನಾವಿಬ್ಬರೇ ಮತ್ತಾರಿಗೂ ಪ್ರವೇಶವಿಲ್ಲ.
ಅಂದಿನಿಂದ ಇಬ್ಬರ ಫೋನುಗಳಿಗೂ ಬಿಡುವಿರಲಿಲ್ಲ
ಘಂಟಾನುಗಟ್ಟಲೆ ಮಾತನಾಡುತ್ತಾ ಹರಟುತಿದ್ದರೆ
ಹೊತ್ತು ಹೋಗಿದ್ದೆ ತಿಳಿಯುತ್ತಿರಲಿಲ್ಲ

ಕಣ್ಣುಗಳ ತುಂಬ ಅವನದೇ ಬಿಂಬ , ಹೊಂಗನಸುಗಳು, ಅಮಲಿನಲ್ಲಿದ್ದಂತೆ ಭಾಸವಾಗುತ್ತಿತ್ತು. ಸವಿ ಸವಿ ಕ್ಷಣಗಳು ಸವಿ ಸವಿ ಕನವರಿಕೆಗಳು , ಮನಸು ಅವನ ಸ್ಪರ್ಷಕ್ಕೆ ಹಾತೊರೆಯತೊಡಗಿತ್ತು. ಮೈ ಮನಗಳಲ್ಲಿ ನವ ಚೇತನ ತುಂಬಿದಂತಾಗುತ್ತಿತ್ತು.
ಎಷ್ಟೋ ರಾತ್ರಿ ಕನಸುಗಳಲ್ಲಿ ಏನೇನೋ ಆಗತೊಡಗಿ ಒಂದು ಕ್ಷಣ ಕಂಪನ, ಜೊತೆಗೇ ಆ ಸಂತಸವನ್ನು ಮನಸಾರೆ ಸವಿಯುತ್ತಿದ್ದೆ
ಯಾವಾಗಲಾದರೂ ಅವನು "ಸೌಮ್ಯ ಏನೇ ನಾನು ನಿನ್ನಕನಸಲ್ಲಿ ಬರ್ತೀನೇನೆ,"ಎಂದಾಗ " ಹೂ" ಎನ್ನುತ್ತಿದ್ದೆನಾದರೂ "ಬಂದು ಏನು ಮಾಡ್ತೀನಿ " ಎಂದು ನಗುತ್ತಾ ಕೇಳುತ್ತಿದ್ದಾಗ ಒಮ್ಮೆಲೇ ಗಾಭರಿಯಾಗಿ
"ಏನಿಲ್ಲ ಹೀಗೆ ಬಂದು ಹೋಗ್ತೀರಾ " ಎಂದಂದು ಮುಖ ಮುಚ್ಚಿಕೊಳ್ಳುತ್ತಿದ್ದೆ ಎಲ್ಲಿ ತನ್ನ ಭಾವನೆಗಳು ಅವನಿಗೆ ಗೊತ್ತಾಗುತ್ತದೆ ಎಂದು......
"ಏಯ್ ಕಳ್ಳಿ............" ಎಂದಾಗಂತೂ ಆಗಸವನ್ನೇ ಸೆರಗಾಗಿ ಮಾಡಿಕೊಂಡು ಓಡುವಂತೆ ಆಗುತ್ತಿತ್ತು
ಒಟ್ಟಿನಲ್ಲಿ ಅವನೇ ಮನದ ತುಂಬಾ, ಕಣ್ನ ತುಂಬಾ , ಸಿಂಗಾರಗೊಳ್ಳುವುದೂ ಅವನಿಗಾಗಿಯೇ ಅಂತನಿಸುತ್ತಿತ್ತು.

ನನ್ನೀ ರೂಪ ಅವನ ಕಣ್ಣಿಗ್ ಬಿದ್ದರೇ ಸಾಕು ಎಂದನಿಸುತ್ತಿತ್ತು.

" ಸೌಮ್ಯ ನಾಳೇ ಸಿನಿಮಾಗೆ ಹೋಗೋಣ ಬರ್ತೀಯಾ" ಎಂದು ಕೇಳಿದ್ದ ಆತ ಆವತ್ತು . ಹೂ ಎನ್ನಬೇಕನ್ನಿಸಿದರೂ ಹೇಳಲಾಗಲಿಲ್ಲ
"ಊ ಹೂ " ಎಂದಂದು ನೆಲ ನೋಡಿದ್ದೆ..............
"ಸರಿ ಬಿಡು ಇನ್ನೇನು ಒಂದು ತಿಂಗಳು ಅಷ್ಟೇ ತಾನೆ. ಆಮೇಲೆ ಊಹೂ ಅನ್ನು ನೋಡೋಣ " ಎಂದಾಗ ಮತ್ತೊಮ್ಮೆ ಬಲವಂತ ಮಾಡಬಾರದೇ ಅನ್ನಿಸಿತು. ಆತ ಮಾಡಲಿಲ್ಲ......... ಮನಸಿನ ಮಾತು ಅರಿವಾಗುತ್ತದೆಯೇ ಅವನಿಗೆ ಇಲ್ಲಾ
ಆಗೊಮ್ಮೆ ಫೋನ್ ಮಾಡಿದಾಗ
"ಏನ್ಮಾಡ್ತಾ ಇದ್ದೀರಾ ಎಂದು ಕೇಳಿದ್ದೇ
ಅವನು " ನಮ್ಮ ಮಗನಿಗೆ ಮೆಡಿಕಲ್ ಸೀಟ್ ಸಿಗುತಾ ಇಲ್ಲವಾ ಅಂತ ಯೋಚಿಸುತ್ತಿದ್ದೆ" ಎಂದಾಗಂತೂ ಮನ ತುಂಬಿಬಂದಿತ್ತು
ಎಷ್ಟೊಂದು ಯೋಚನೆ ಮಾಡಿದಾನೆ ............ ಬಹಳ ಫ಼ಾರ್‌ವಾರ್ಡ್ ... ...........ಕಿರುನಗೆ ತಂತಾನೆ ಮೂಡಿ ಬಂದಿತ್ತು
ಮತ್ತೊಮ್ಮೆ ಫೋನ್ ಮಾಡಿದಾಗ

"ಡೋಂಟ್ ಡಿಸ್ಟರ್ಬ್ ಮಿ . ನಾನು ಮೂನಾರ್ನಲ್ಲಿ ಹನಿಮೂನ್ ಮೂಡ್ ನಲ್ಲಿದ್ದೇನೆ . ಬೇಕಿದ್ದರೆ ನೀನೂ ಬಾ " ಎಂದಿದ್ದ

ಅಂದೆಲ್ಲಾ ಎದೆ ಬಡಿತ ಜೋರಾಗಿತ್ತು. ಹನಿಮೂನಿನ ಚಿತ್ರಣ ಕಣ್ಣಲ್ಲಿ ಮೂಡುತ್ತಿತ್ತು......
ಚಿತ್ರಗಳಲ್ಲಿನ ಮೊದಲ ರಾತ್ರಿಗಳ ಸೀನನ್ನು ನೆನಪಿಸಿಕೊಳ್ಳುತ್ತಿದ್ದೆ.........
ಹಾಲು ತೆಗೆದುಕೊಂಡು ಹೋಗೋ ಪದ್ದತಿ ನಮ್ಮಲ್ಲು ಇದೆಯೇ ಅಂತ ಯೋಚಿಸುತ್ತಿದ್ದೆ.
ಅವನಿಗೆ ಏನೇನು ಇಷ್ಟ ಅದನ್ನೆಲ್ಲಾ ಪಟ್ಟಿ ಮಾಡಿಟ್ಟುಕೊಳ್ಳ್ತತೊಡಗಿದೆ, ಅಡುಗೆ ಮನೆಗೆ ಕಾಲಿಟ್ಟಿರದಿದ್ದ ನಾನು ಇತ್ತೀಚಿಗೆ ಅಡುಗೆ ಮನೆಯನ್ನೆ ಖಾಯಂ ಮಾಡಿಕೊಂಡು ಕೂರುತ್ತಿದ್ದೆ. ಹಾಗೂ ಹೀಗೂ ಒಂದಷ್ಟು ಅಡುಗೆಗಳನ್ನೂ ಕಲಿಯುತ್ತಿದ್ದೆ
ಎಂದೋ ಸಿನಿಮಾದಲ್ಲಿ ನೋಡಿದ್ದ ದೃಶ್ಯಗಳು ಮನಸಿಗೆ ಬಂದು ತೊಂದರೆ ಕೊಡಲಾರಂಭಿಸಿದ್ದವು
ಅಡುಗೆ ಮನೆಯಲ್ಲಿದ್ದಂತೆಯೇ ಹಿಂದಿನಿಂದ ಬಂದು ತಬ್ಬಿಕೊಳ್ಳುವ ಚಿತ್ರಗಳು ಮೂಡಿ ಮೈ ಬೆವೆತು ಹೋಗುತ್ತಿತ್ತು.ಕನಸಿನಲ್ಲಿಯೇ ತೇಲಿ ಹೋದಂತೆಯೇ,ನಗು ತಂತಾನೆ ಮೂಡುತ್ತಿತ್ತು. ಇಹದ ನೆನಪು ಮರೆಯಾಗುತ್ತಿತ್ತು,
ಅಮ್ಮ ಬೈಯ್ಯುತ್ತಿದ್ದರು
" ಏ ಮದುವೆ ಆದ ಮೇಲೆ ಇದ್ದೇ ಇದೆ. ನೆಟ್ಟಗೆ ಕೂತ್ಕೋಳ್ಳೇ"
ಗಡಿಬಿಡಿ ಇಂದ ಎದ್ದು ಕೂರುತ್ತಿದ್ದೆ
ಅಪ್ಪಿ ತಪ್ಪಿ ಅವನೇನಾದರೂ ಎದುರು ಬಂದರಂತೂ ಮುಗಿಯಿತು.
ಅತ್ತಲ್ಲಿಂದ ಮರೆಯಾಗಿ ಹೋಗುವಂತೆ ನಿಲ್ಲುತ್ತಿದ್ದರು ಅವನನ್ನೇ ನೋಡುತ್ತಿದ್ದೆ, ಅವನಿಗೆ ನಾನು ಕಾಣುತ್ತಿರಲಿಲ್ಲ, ಆದರೆ ಆತ ನನಗೆ ಕಾಣಿಸುತ್ತಿದ್ದ
ಆತನ ಕಣ್ಣೂ ನನ್ನನ್ನೇ ಹುಡುಕುತಿರುವುದು ಎಂದು ತಿಳಿಯುತ್ತಿದ್ದರೂ ಅವನ ಆ ಪಜೀತಿಯನ್ನ ನೋಡಿ ಮನಸಾರೆ ಆನಂದಿಸುತ್ತಿದ್ದೆ. ಆಮೇಲೆ ಅಯ್ಯೋ ಪಾಪ ಎಂದನಿಸಿ ಏನೋ ಹುಡುಕುವಂತೆ ಅವನಮುಂದೆ ನಿಲ್ಲುತ್ತಿದ್ದೆ.
ಕಣ್ಣಲ್ಲೇ ಮಾತನಾಡುತ್ತಿದ್ದ, ಸೂಪರ್ ಎನ್ನುತ್ತಿದ್ದ, ಆಕಣ್ಣುಗಳಲ್ಲಿನ ಸನ್ನೆಯ ಮುಂದೆ ಸೋತು ಹೋಗಿ....................
ಮತ್ತೆ ಎದೆ ಬಡಿತ ಹೆಚ್ಚಾಗಿ ಒಳಗೆ ಓಡಿಹೋಗುತ್ತಿದ್ದೆ
ಅಂದೊಮ್ಮೆ ಆತ ಮನೆಗೆ ಬಂದಿದ್ದಾಗ , ಮನೆಯಲ್ಲಿ ಯಾರೂ ಇರಲಿಲ್ಲ. ಗಬಕ್ಕನ್ನೇ ಬಳಿಗೆಳೆದುಕೊಂಡು ಚುಂಬಿಸಿದ್ದ . ಛೀ ಎಂಜಲು ಎಂದಾಗ ....ಮತ್ತೆ ಬಳಿಗೆಳೆದುಕೊಂಡಾಗ ಹೆದರಿ ಕೈ ಕೊಸರಿಕೊಂಡು ಹೊರಗೋಡಿಬಂದಿದ್ದೆ. ಎರೆಡು ಕ್ಷಣಗಳಾದ ಮೇಲೂ ಆತ ಹೊರಗಡೆ ಬರದಿದ್ದಾಗ ಮತ್ತೆ ಒಳಗೆ ಹೋದಾಗ..........
"ಸಾರಿ ಶೀತಲ್" ಎಂದಿದ್ದ ಆತನ ಕಣ್ಣುಗಳು ಆತನ ಕೆಳಗೆ ಬಾಗಿದ್ದವು. ಆ ಕಣ್ಣುಗಳನ್ನು ಚುಂಬಿಸುವ ಮನಸಾಗಿದ್ದರೂ ಸಹಾ ತೋರಗೊಡಲಿಲ್ಲ,........ಮತ್ತೊಮ್ಮೆ ಆ ಚುಂಬನದ ಸುಖಕ್ಕೆ ಮನಸ್ಸು ಹಾತೊರೆದರೂ ಮನಸು ಗಟ್ಟಿ ಮಾಡಿಕೊಂಡಿದ್ದೆ....
ಅಂದು ರಾತ್ರಿ ಎಲ್ಲಾ ಹೇಳಲಾಗದ ಸಂತೋಷದ ಕನಸುಗಳು, ರಂಗು ರಂಗಾದ ಕನಸಿಗೆ ಅವನೇ ರಾಜ ನಾನೇ ರಾಣಿ ಮತ್ತಾರೂ ಇಲ್ಲ ........................"""""""""""".ಏನೇನೋ ಆಸೆ ನೀತಂದ ಭಾಷೆ""""""""""""ಹಾಡುಗಳು ಒಂದೊಂದಾಗಿ ಕಾಡತೊಡಗಿದ್ದವು


ಈ ಎಲ್ಲಾ ಕನಸುಗಳ ಮಧ್ಯೆಯೇ ಎಂದೋ ಕೇಳುತ್ತಿದ್ದ ಅತ್ತೆ ಕಾಟ,ನಾದಿನಿಯರ ಜಗಳ ಎಲ್ಲವೂ ಕಣ್ಣ ಮುಂದೆ ಬಂದು ಭಯವೂ ಆಗುತ್ತಿತ್ತು
ಅಲ್ಲಿ ಹೋಗಿ ಅಲ್ಲಿನ ಆಚಾರ, ವಿಚಾರ ಕಲಿಯಲಾಗುತ್ತದೆಯೇ ?
ಮೊದಲೇ ಒಬ್ಬಳೇ ಮಗಳೆಂದು ಪ್ರೀತಿಯಿಂದ ಬೆಳೆಸಿದ್ದ ಅಮ್ಮ ತನಗೆ ಏನನ್ನೂಹೇಳಿಕೊಟ್ಟಿರಲಿಲ್ಲ
ಅಥವ ಅವನಿಗೆ ಹೇಳಿಬಿಡಲೇ ಬೇರೆ ಮನೆ ಮಾಡಿಕೊಂಡುಬಿಡೋಣ ಅಂತಾ ಎಂಬ ಯೋಚನೆಗಳೂ ಬರುತ್ತಿದ್ದವು
ಆದರೆ ಈಗಲೆ ಹೇಳಿಬಿಟ್ಟರೆ ಅವನಿಗೆ ತನ್ನ ಮೇಲೆ ಯಾವ ಭಾವನೆ ಬರುತ್ಟೋ ಬೇಡ ...........

ಮತ್ತೆ ಅವರ ಅಮ್ಮನಿಗೆ ನಾನು ಹಿಡಿಸಿದ್ದೀನೋ ಏನೋ...................ಮೊದಲೆ ಮಗ ಮೆಚ್ಚಿದವಳು..........ಏನಾದರೂ ಬ್ದೈದರೇ.......... ಏನಾದರೂ ಅನ್ನಲಿ ಇವನಿಗಾಗಿಹೊಂದಿಕೊಂಡು ಹೋಗಿಬಿಡುವುದು ಅಷ್ಟೇ..............

ಆಗಾಗ ಅಮ್ಮ ಅಪ್ಪನನ್ನ ಬಿಟ್ಟಿರಬೇಕಾದ ಸಂಕಟ ನೆನಪಿಗೆ ಬಂದುಕಣ್ನ್ಲಲ್ಲಿ ನೀರು ಬರುತ್ತಿತ್ತು
ಅಪ್ಪ ಅಮ್ಮನ್ನ ಇಲ್ಲಿಯವರೆಗೆ ಬಿಟ್ಟಿದ್ದೇ ಇಲ್ಲ.
ಹೇಗೆ ಬಿಟ್ಟಿರಲಿ ಇವರನ್ನ , ಇರಲಾಗುತ್ತದೆಯೇ ನನಗೆ, ಒಮ್ಮೊಮ್ಮೆ ಅಳುತ್ತಿದ್ದೆ ಒಬ್ಬಳೇ ಕೂತಾಗ. ಆಗೇನಾದರೂ ಅಮ್ಮ ನೋಡಿದಾಗ ಅಮ್ಮನೂ ಕಣ್ಣೊರೆಸಿಕೊಳ್ಳುತ್ತಿದ್ದರು.

ಅವನಾದರೂ ಒಮ್ಮೆಯೂ ನಿಂಗೆ ಬೇಜಾರಾಗ್ತಾ ಇದ್ದೀಯಾ ಎಂದು ಕೇಳಿರಲಿಲ್ಲ
ಅವನ ಬಳಿ ನಾನು ನಿರೀಕ್ಶಿಸಿದ್ದ ಒಂದು ಮಾತು ಅವನಿಗೆ ತಿಳಿಯಲಿಲ್ಲ
"...............ನಾನು ನಿನಗೆ ತಂದೆ ತಾಯಿ ಆಗಿ ಕಾಯುತ್ತೇನೆ" ಎಂಬ ಮಾತದು
ಬರಲೇ ಇಲ್ಲ ಅವನಿಂದ
ಅಥವ ಅವನಿಗೆ ಹೇಗೆ ತಿಳಿಯುತ್ತದೆ
ಹೆಣ್ಣಿನ ಮನಸಿನಮಾತು ಎಂದಂದುಕೊಂಡು ಸಮಾಧಾನಗೊಳ್ಳುತ್ತಿದ್ದೆ

ಅಂತೂ ಇಂತೂ ಆ ಕನಸಿನ ದಿನ ಬಂದೇ ಬಿಟ್ಟಿತ್ತು

ಮದುವೆಯಾಯ್ತು
ಮತ್ತೆಲ್ಲಾ ಬೇರಾವುದೋ ಕನಸಿನಂತೆ . ನಡೆಯತೊಡಗಿತು
....................
"ಏ ಹುಳಿಗೆ ಉಪ್ಪು ಸರಿಯಾಗಿ ಹಾಕು ಅಂತ ಎಷ್ಟು ಸಲಾ ಹೇಳಿಲ್ಲಾ . ಮದುವೆಯಾಗಿ ಒಂದು ಮಗುವಿನ ತಾಯಾದರೂ ಬುದ್ದಿ ಬಂದಿಲ್ಲ " ಎಂದು ಬೈಯ್ಯುತ್ತಿದ್ದ ಆ ನನ್ನ ರಾಜ
ನೆನಪಿನ ಅರಮನೆಯಿಂದ ವಾಸ್ತವಕ್ಕೆ ಬಂದೆ
"ಹೌದೌದು ಒಲ್ಲದ ಗಂಡನಿಗೆ ಮೊಸರಲ್ಲೂಕಲ್ಲು ಅಂತ ನಿಮಗೆ :" ನಾನೂ ಕಿರುಚಿದೆ..... ನನ್ನೆಲ್ಲಾ ಕನಸೂಗಳೂ ಬೇರಾವುದೋ ರೂಪ ಧರಿಸಿ ಒಮ್ಮೆ ದಹಿಸಿ, ಒಮ್ಮೆ ಪ್ರೀತಿಸಿ. ಒಮ್ಮೆ ಅಪ್ಯಾಯ ಮಾನವಾಗಿ, ಮತ್ತೊಮ್ಮೆ ಬೇಸರವಾಗುವಂತೆ ನನಸಾಗಿ ಮೈದಾಳಿ ನನ್ನ ಮುಂದಿತ್ತು
ವಾಸ್ತವ ಬೇರೆಯೇ ಅಲ್ಲವೇ? ಎಂದಂದು ಕೊಂಡು ಮುಂದಿನ ಕೆಲಸಕ್ಕೆ ತಯಾರಾದೆ.



Thursday, April 14, 2011

ಪ್ರೀತಿ ತ್ಯಾಗ ಗೆಳೆತನ

ಬೆಳಗ್ಗೆ ಬಂದಾಗಿನಿಂದ ಪ್ರಸನ್ನ ಕಾಣಿಸಿರಲಿಲ್ಲ .

ಆಫೀಸಿನ ಎಲ್ಲಾ ಕಡೆಯಲ್ಲೂ ಹುಡುಕಿದಾಗ ಆಫೀಸಿನ ಹಿಂದಿನ ಪಾರ್ಕನಲ್ಲಿ ನಿಂತಿದ್ದು ಕಾಣಿಸಿತು. ಮಾತಾಡಿಸೋಣ ಎಂದುಕೊಂಡು ಹೊರಟೇ ಬಿಟ್ಟೆ

ಎಲ್ಲೋ ನೋಡುತ್ತಿದ್ದರು . ನಾನು ಬಂದು ನಿಂತದ್ದೂ ಕಂಡಿರಲಿಲ್ಲ

"ಏನ್ರಿ ಪ್ರಸನ್ನ ಏನೋ ಬಹಳ ಗಹನವಾಗಿ ಯೋಚಿಸ್ತಾ ಇದ್ದೀರಲ್ಲಾ ಏನು ವಿಷ್ಯ?" ಮೆಲ್ಲಗೆ ಕೇಳಿದೆ

ಬೆಚ್ಚಿದರೆನಿಸುತ್ತದೆ. ಒಮ್ಮೆ ದಂಗಾಗಿ ಮತ್ತೆ ಉಸ್ಸೆಂದು ಉಸಿರೆಳೆದುಕೊಂಡರು.

"ಏನಿಲ್ಲಾ ಹೀಗೆ ಕತೆಗೆ ಮುಕ್ತಾಯ ಹೇಗೆ ಮಾಡೋಣ ಅಂತ ಯೋಚನೆ ಮಾಡ್ತಾಇದ್ದೇನೆ"

ಪ್ರಸನ್ನ ನಿಮ್ಮ ಕತೆಯ ನಾಯಕನಿಗೆ ನಾಯಕಿಯನ್ನೇನೋ ತೋರಿಸಿದಿರಿ . ಆದರೆ ಆ ನಾಯಕಿ ಈಗಾಗಲೇ ಮತ್ತೊಬ್ಬನ ಮಡದಿಯಾಗಿದ್ದಾಳೆ . ಆದರೆ ಆಕೆಯೇ ಈ ಕಥಾನಾಯಕ ಕಾಲೇಜಿನಲ್ಲಿದ್ದಾಗಿನಿಂದ ಪ್ರೀತಿಸುತ್ತಿದ್ದ ಹುಡುಗಿ. ಆದರೆ ಹುಡುಗ ಸಿರಿವಂತನಲ್ಲ ಅನ್ನುವ ಕಾರಣಕ್ಕೆ ಆತನನ್ನ ತಿರಸ್ಕರಿಸಿದ್ದಳು. ಈಗ ಆ ಕಥಾನಾಯಕ ಸಮಾಜದ ಗಣ್ಯ ವ್ಯಕ್ತಿ ಯಾಗಿದ್ದಾನೆ ಜೊತೆಗೆ ಹುಡುಗಿಯೂ ಇವನ ಜೊತೆ ಬರಲು ಒಪ್ಪಿದ್ದಾಳೆ . ಮತ್ತೇಕೆ ತಡ ಪ್ರೀತಿಯನ್ನು ಒಂದು ಮಾಡಿ.

"ಅಲ್ಲೇ ತೊಡಕಾಗಿರೋದು ಸುಂದರ್ .ನಾಯಕಿಯ ಗಂಡ ನಾಯಕನಿಗೆ ಗೆಳೆಯ . ಗೆಳೆಯನಿಗೆ ಮೋಸಮಾಡುವುದು ತಪ್ಪು ತಾನೇ?"

"ಪ್ರಸನ್ನ . ಎಲ್ಲಾ ಕತೆಗಳಲ್ಲೂ ಸಿನಿಮಾಗಳಲ್ಲೂ ನಾಯಕ ಗೆಳೆಯನಿಗೋಸ್ಕರ ಪ್ರೀತಿನ ತ್ಯಾಗ ಮಾಡ್ತಾನೆ . ಆದರೆ ಇಲ್ಲಿ ಕತೆಗೆ ಅದೇ ಟ್ವಿಸ್ಟ್ ಆಗಿರಲಿ. ಸಾಧ್ಯವಾದಲ್ಲಿ ಈ ನಾಯಕ ಗೆಳಯನಿಗೆ ಹೀಗೆ ಪತ್ರ ಬರೆದಿಟ್ಟು ಹೋಗಲಿ. "ಡಿಯರ್ ಗೆಳೆಯ

ಪ್ರೀತಿ ತ್ಯಾಗದ ಸ್ವರೂಪ ಅಂತಾರೆ ಹಾಗೆಯೇ ನನ್ನ ಪ್ರೀತಿಯಿಂದಲೂ ಒಂದು ತ್ಯಾಗವಾಯಿತು. ಅದು ನಿನ್ನ ಮಡದಿಯ ತ್ಯಾಗ ಆಕೆ ನನಗಾಗಿ ತನ್ನ ಗಂಡನನ್ನು ತ್ಯಾಗ ಮಾಡಿದ್ದಾಳೆ. ಗೆಳೆತನ ಪ್ರೀತಿ ಇವೆರೆಡರ ನಡುವಲ್ಲಿ ಯಾವುದನ್ನು ತ್ಯಾಗ ಮಾಡಲಿ ಎಂದು ಯೋಚಿಸಿದೆ ಬಹಳವೇ ಯೋಚಿಸಿದೆ ಕೊನೆಗೆ ಗೆಳೆತನವನ್ನ ತ್ಯಾಗ ಮಾಡಬಹುದು ಎಂದೆನಿಸಿತು. ಹಾಗಾಗಿ ಇನ್ನು ನನ್ನ ನಿನ್ನ ಭೇಟಿ ಸಾಧ್ಯವಿಲ್ಲ. ಹಾಗೆಯೇ ನಿನ್ನ ಮಡದಿಯ ಭೇಟಿಯೂ . ಬಹುಷ: ಕೋರ್ಟ್ನಲ್ಲಿ ಮಾತ್ರ ಅನ್ನಿಸುತ್ತದೆ ಬಾಯ್ ಬಾಯ್ ಗೆಳೆಯ"

"ಆದರೆ ಜನ ಒಪ್ತಾರ? . ಆ ಗೆಳೆಯನಿಗೆ ಆಘಾತವಾಗಲ್ವಾ? ಗೆಳೆತನಕ್ಕೆ ಯಾವ ಬೆಲೆಯೂ ಇಲ್ವಾ"

"ಪ್ರೀತಿ ಕುರುಡು . ಅದು ಯಾವುದನ್ನೂ ನೋಡೋದಿಲ್ಲ . ನೋಡಿದರೂ ಬೆಲೆ ಕೊಡೋದಿಲ್ಲ." ನಕ್ಕೆ

"ಆಯ್ತು ಸುಂದರ್ ಕತೆಗೆ ಒಂದು ವಿಭಿನ್ನ ಅಂತ್ಯ ಹೇಳಿದ್ದಕ್ಕಾಗಿ ಧನ್ಯವಾದ" ಪ್ರಸನ್ನ ನಕ್ಕರು. ಅವರ ಕಣ್ಣಲ್ಲಿ ಮಿಂಚು ಕಾಣಿಸುತ್ತಿದೆಯೇ?


ಎಲ್ಲೋ ಕತೆ ನಿಜವಾಗುತ್ತಿದೆಯೇ ಎಂದನಿಸುತ್ತಿತ್ತು. ಪ್ರಸನ್ನ ಅವರ ಕತೆಯ ಮುಂದಿನ ಭಾಗ ಪ್ರಿಂಟ್‌ಗೆ ಹೋಗಿತ್ತು.

ಮರುದಿನ


ಎಲ್ಲವನ್ನೂ ಜೊತೆಗೆ ಗಂಡನನ್ನೂ ತೊರೆದು ಬರಲು ಸಿದ್ದವಾಗಿದ್ದ ಮಂದಾಕಿನಿ ನನ್ನ ಪ್ರೇಯಸಿ ಪ್ರಸನ್ನರವರ ಮಡದಿಯಾಗಿದ್ದಾಕೆ ಏರ್ ಪೋರ್ಟಿನಲ್ಲಿ ನನಗಾಗಿ ಕಾದು ನಿಂತಿದ್ದಳು . ಅವಳನ್ನು ನೋಡಿದ ಕೂಡಲೆ ಪ್ರಸನ್ನರಿಗೆ ಆಗಲೇ ಸಿದ್ದ ಪಡಿಸಿಕೊಂಡಿದ್ದ ಮೆಸೇಜ್ ಕಳಿಸಿದೆ

"

ಡಿಯರ್ ಗೆಳೆಯ

ಪ್ರೀತಿ ತ್ಯಾಗದ ಸ್ವರೂಪ ಅಂತಾರೆ ಹಾಗೆಯೇ ನನ್ನ ಪ್ರೀತಿಯಿಂದಲೂ ಒಂದು ತ್ಯಾಗವಾಯಿತು. ಅದು ನಿನ್ನ ಮಡದಿಯ ತ್ಯಾಗ ಆಕೆ ನನಗಾಗಿ ತನ್ನ ಗಂಡನನ್ನು ತ್ಯಾಗ ಮಾಡಿದ್ದಾಳೆ. ಗೆಳೆತನ ಪ್ರೀತಿ ಇವೆರೆಡರ ನಡುವಲ್ಲಿ ಯಾವುದನ್ನು ತ್ಯಾಗ ಮಾಡಲಿ ಎಂದು ಯೋಚಿಸಿದೆ ಬಹಳವೇ ಯೋಚಿಸಿದೆ ಕೊನೆಗೆ ಗೆಳೆತನವನ್ನ ತ್ಯಾಗ ಮಾಡಬಹುದು ಎಂದೆನಿಸಿತು. ಹಾಗಾಗಿ ಇನ್ನು ನನ್ನ ನಿನ್ನ ಭೇಟಿ ಸಾಧ್ಯವಿಲ್ಲ. ಹಾಗೆಯೇ ನಿನ್ನ ಮಡದಿಯ ಭೇಟಿಯೂ . ಬಹುಷ: ಕೋರ್ಟ್ನಲ್ಲಿ ಮಾತ್ರ ಅನ್ನಿಸುತ್ತದೆ ಬಾಯ್ ಬಾಯ್ ಗೆಳೆಯ"

ಪ್ರಸನ್ನರಿಗಾಗಿರಬಹುದಾದ ಆಘಾತವನ್ನ ಊಹಿಸಿಕೊಳ್ಳಲಿಲ್ಲ . ಊಹಿಸಿಕೊಂಡರೂ ಪ್ರೀತಿ ಕುರುಡಲ್ಲವೇ? ಬೆಲೆಕೊಡಲಿಲ್ಲ. ಮಂದಾಕಿನಿಯ ಹೆಗಲಮೇಲೆ ಕೈಹಾಕಿ ಕರೆದೊಯ್ದೆ.